News Cafe | 3 Students Leave Sri Sai School After Receiving Call From Other Country | HR Ranganath

Public TV 2022-05-20

Views 19

News Cafe | 3 Students Leave Sri Sai School After Receiving Call From Other Country | HR Ranganath

#PublicTV #HRRanganath #NewsCafe

ಕೊಡಗಿನ ಪೊನ್ನಂಪೇಟೆ ತಾಲೂಕಿನ ಶ್ರೀಸಾಯಿ ವಿದ್ಯಾ ಸಂಸ್ಥೆಯಲ್ಲಿ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನಡೆಸಿದ್ದ ತ್ರಿಶೂಲದೀಕ್ಷೆ ಹಾಗೂ ಶಸ್ತ್ರಾಸ್ತ್ರ ತರಬೇತಿ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಶಾಲಾ ವ್ಯಾಪ್ತಿಯಲ್ಲಿ ಬಂದೂಕು ತರಬೇತಿ ನಡೆದಿಲ್ಲ ಅಂತ ವಿದ್ಯಾಸಂಸ್ಥೆ ಸ್ಪಷ್ಪಡಿಸಿದೆ. ರಾಜಕೀಯ ವಿಚಾರಕ್ಕೆ ಶಾಲೆಯ ಹೆಸರನ್ನು ಎಳೆದು ತರದಂತೆ ಮನವಿ ಮಾಡಿದೆ. ಇದೇ ವೇಳೆ ಮಹತ್ವದ ಮಾಹಿತಿ ನೀಡಿರುವ ಶಾಲೆ ಆಡಳಿತ ಮಂಡಳಿ, ಪ್ರಕರಣದ ಬಳಿಕ ಹೊರ ದೇಶದಿಂದ ಕರೆ ಬಂದಿದ್ದು, ಕರೆಯ ಪರಿಣಾಮ ಮೂವರು ಮುಸ್ಲಿಂ ವಿದ್ಯಾರ್ಥಿಗಳು ಶಾಲೆಯಿಂದ ಟಿಸಿ ಪಡೆದು ಹೋಗಿದ್ದಾರಂತೆ.. ವಿದ್ಯಾರ್ಥಿಗಳ ಪೋಷಕರೊಂದಿಗೆ ವಿದೇಶದಿಂದ ದೂರವಾಣಿ ಕರೆ ಮಾಡಿ ತಮ್ಮ ಮಕ್ಕಳನ್ನು ಆ ಶಾಲೆಯಲ್ಲಿ ಓದಿಸಬೇಡಿ. ಆ ಶಾಲೆಗೆ ನೀವು ಕಟ್ಟಿರುವ ಶಾಲೆ ಶುಲ್ಕವನ್ನು ನಾವು ಪಾವತಿ ಮಾಡುತ್ತೇವೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಓದುವ ಶಾಲೆಗೆ ಸೇರಿಸುವಂತೆ ಮಾತಾನಾಡಿದ್ದಾರೆ. ಇದೀಗಾ ಹೊರ ದೇಶದಿಂದ ಕರೆ ಮಾಡಿದವರ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

Share This Video


Download

  
Report form